ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಇಂದಿನ ವರುಣಾ ಕ್ಷೇತ್ರ ಪ್ರವಾಸ ದಿಢೀರ್ ರದ್ದಾಗಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ವರುಣಾದಲ್ಲಿ ಡಿ.ಕೆ ಶಿವಕುಮಾರ್ ಪ್ರಚಾರ ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಪ್ರವಾಸ ರದ್ದು ಮಾಡಲಾಗಿದೆ.
ಈಗಾಗಲೆ ನಿಗದಿಯಾಗಿರುವಂತೆ ಇಂದು ಮೈಸೂರು ಜಿಲ್ಲೆಯ ವಿವಿಧೆಡೆ ಡಿ.ಕೆ ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂಜನಗೂಡಿಗೆ ಆಗಮಿಸಲಿರುವ ಅವರು ಕ್ಷೇತ್ರದಲ್ಲಿ ದಿ. ಧ್ರುವನಾರಾಯಣ ಪುತ್ರ ದರ್ಶನ್ ಧ್ರುನಾರಾಯಣ ಪರ ಮತಯಾಚಿಸಲಿದ್ದಾರೆ.
ಸಂಜೆ 5:30ಕ್ಕೆ ಮೈಸೂರು ನಗರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.