ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬೆನ್ನುನೋವಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದೆ. ಜೈಲಿನಿಂದ ಹೊರಬಂದ ನಂತರ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಅಪಾರ್ಟ್ಮೆಂಟ್ಗೆ ತೆರಳಿದ್ದಾರೆ. ಇಂದು ಮಗ ವಿನೀಶ್ ಜನ್ಮದಿನ. ಈ ವಿಶೇಷ ದಿನಕ್ಕೆ ಸರಿಯಾಗಿ ಅವರು ಮನೆಗೆ ಬಂದಿದ್ದಾರೆ.
ಇಂದು ವಿನೀಶ್ ಹುಟ್ಟುಹಬ್ಬ. ರಾತ್ರಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಲಾಗಿದೆ. ಅವರು ತಮ್ಮ ಮಗನೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಬಳಿಕ ಊಟ ಮಾಡಿ ವಿಶ್ರಾಂತಿ ಪಡೆದಿದ್ದಾರೆ. ಹಲವು ತಿಂಗಳುಗಳ ನಂತರ, ಅವರು ಬೆಡ್ನಲ್ಲಿ ಅವರು ಹಾಯಾಗಿ ನಿದ್ರಿಸಿದ್ದಾರೆ.
ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಕೆಲವೆಡೆ ಪಟಾಕಿಗಳನ್ನೂ ಕೂಡ ಸಿಡಿಸಲಾಗಿದೆ. ಸದ್ಯಕ್ಕೆ ಇದು ತಾತ್ಕಾಲಿಕ ರಿಲೀಫ್. ಆರು ವಾರಗಳಲ್ಲಿ ಅವರು ಮತ್ತೆ ಜೈಲು ಸೇರಲಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಹೇಗೆ ಚೇತರಿಸಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.