ಕೃಷಿ ಮಾರ್ಗಗಳಿಗೆ ನಿತ್ಯ 5 ಗಂಟೆಗಳ ವಿದ್ಯುತ್ : ಮಹಂತೇಶ ಬೀಳಗಿ ಭರವಸೆ

ಹೊಸದಿಗಂತ ವರದಿ ಚಿತ್ರದುರ್ಗ:

ಜಿಲ್ಲೆಯ ಎಲ್ಲಾ ಕೃಷಿ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಕೃಷಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ನೀಡುವ ಸಮಯವನ್ನು ಹಾಗೂ ಇತರೆ ವಿಷಯಗಳನ್ನು ಚರ್ಚಿಸುವ ಸಂಬಂಧ ಬೆಸ್ಕಾಂ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಸಂಜೆಯ ವೇಳೆಯಲ್ಲಿ ಕೃಷಿಯ ಮಾರ್ಗಗಳಲ್ಲಿ ಬರುವ ತೋಟದ ಮನೆಗಳಿಗೆ ಲೈಂಟಿಗ್ ವ್ಯವಸ್ಥೆಗಾಗಿ ಸಂಜೆ 6 ರಿಂದ ಬೆಳಿಗ್ಗೆ6 ರವರೆಗೆ ಸಿಂಗಲ್ ಫೇಸ್ ವಿದ್ಯುತ್ ನೀಡುವುದಾಗಿ ತಿಳಿಸಿದರು.
ಸಿಂಗಲ್ ಫೇಸ್ ಅವಧಿಯಲ್ಲಿ ಯಾವುದೇ ಕಾರಣಕ್ಕೂ ತೋಟದ ಮನೆಯ ದೀಪದ ಬಳಕೆಯನ್ನು ಹೊರತುಪಡಿಸಿ ಯಾವುದೇ ಪಂಪ್ ಸೆಟ್ ಗಳನ್ನು ಬಳಸಬಾರದು ಎಂದು ಸೂಚಿಸಿದರು.

ವಿಫಲವಾದ ಪರಿವರ್ತಕಗಳನ್ನು ನಿಗಧಿತ ಅವಧಿಯಲ್ಲಿ ಬದಲಾಯಿಸಲು ಮತ್ತು 11 ಕೆವಿ ಮತ್ತು ಎಲ್.ಟಿ ಮಾರ್ಗಗಳಿಗೆ ಅಡಚಣೆಯಾಗುವ ಮರಗಿಡಗಳನ್ನು ತೆರವು ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಎಲ್ಲಾ ರೈತ ಮುಖಂಡರಿಗೆ ಹಾಲಿ ವಿದ್ಯುತ್ ವ್ಯವಸ್ಥೆಯ ಬಗ್ಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮನವಿ ಮಾಡಿದರು.
ಸಭೆಯಲ್ಲಿ ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್, ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಗೋವಿಂದಪ್ಪ, ದಾವಣಗೆರೆ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್, ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!