ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..
ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತೆ ಏರುಮುಖವಾಗಿದೆ.
ಶುಕ್ರವಾರ 1215 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ.
ಶುಕ್ರವಾರ 881 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 61570 ಕ್ಕೆ ಏರಿಕೆಯಾಗಿದೆ. ಈ ಪೈಕಿ 12900 ಸಕ್ರಿಯ ಪ್ರಕರಣಗಳು. 47865 ಮಂದಿ ಗುಣಮುಖರಾಗಿದ್ದಾರೆ. 805 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 54309 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 5673230ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.