ದಳಪತಿ ಗೆ ಎದುರಾಯ್ತು NCR ಸಂಕಷ್ಟ.. ಕಂಪ್ಲೇಂಟ್ ಕೊಟ್ಟಿದ್ದು ಯಾರು? ಯಾಕೆ? ಇಲ್ಲಿದೆ ಡಿಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದಾರೆ.

ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಮಾರಸ್ವಾಮಿ, ನಿಖಿಲ್ ಮತ್ತು ಬಾಬು ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಕುಮಾರಸ್ವಾಮಿ ವಿರುದ್ಧದ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುವಂತೆ ಎಡಿಜಿಪಿ ಚಂದ್ರಶೇಖರ್ ಅವರು ಪ್ರಾಸಿಕ್ಯೂಷನ್‌ಗೆ ಸೂಚಿಸಿದ್ದಾರೆ. ಇದು ಸುಳ್ಳು ಹೇಳಿಕೆ ಎಂದು ಕುಮಾರಸ್ವಾಮಿ ಹೇಳಿ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಿದ್ದಾರೆ ಎಂದು ಚಂದ್ರಶೇಖರ್ ದೂರು ನೀಡಿದ್ದಾರೆ..

ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿದ್ದರಿಂದ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡುವಂತೆ ಬೆದರಿಕೆ ಹಾಕಿದ್ದಾರೆ ಎಂಬ ದೂರುಗಳು ಬಂದಿವೆ. ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಮತ್ತು ಸುರೇಶ್ ಬಾಬು ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!