ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ಸಿಗರು ಏನೇ ಹೇಳಿದರೂ ಎಚ್.ಡಿ.ಕುಮಾರಸ್ವಾಮಿ ಹಾಸನ ಜಿಲ್ಲೆಯಲ್ಲಿ ಇಂದಿಗೂ ಬಹಳ ಜನಪ್ರಿಯರಾಗಿದ್ದಾರೆ. ಇಂದು ಅರಕಲಗೂಡು ಪಟ್ಟಣಕ್ಕೆ ತಮ್ಮ ಸಹೋದರ ಹೆಚ್.ಡಿ.ರೇವಣ್ಣನವರ ಪುತ್ರ ಪ್ರಜ್ವಲ್ ಪರ ಪ್ರಚಾರಕ್ಕಿಳಿದಿದ್ದಾರೆ.
ಇತ್ತೀಚೆಗೆ ಹಾಸನದಲ್ಲಿ ನಡೆದ ಸಭೆಯೊಂದರಲ್ಲಿ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಅವರ ಮಗ, ನನ್ನ ಮಗ ಎಂದು ಹೇಳುವ ಮೂಲಕ ಪ್ರಜ್ವಲ್ ಮೇಲಿನ ಕಾಳಜಿ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸಿದ್ದು ನಿಮಗೆ ನೆನಪಿರಬಹುದು.
ಇಂದಿನ ಸಭೆಯಲ್ಲಿ ಸ್ಥಳೀಯ ಶಾಸಕ ಎ ಮಂಜು, ಹೊಳೆನರಸೀಪುರ ಶಾಸಕ ರೇವಣ್ಣ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್, ಪ್ರಜ್ವಲ್ ಮೊದಲಾದವರಲ್ಲದೆ ಅನೇಕ ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು.