ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ವೇಳೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಗಳು ನಡೆಸಿದ ನೃತ್ಯ ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಹಿಡಿದುದಕ್ಕೆ ಎಸ್ ಡಿ ಪಿ ಐ ಸಂಘಟನೆ ವಿರೋಧ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಎಸ್ ಡಿ ಪಿ ಐ ಮತ್ತು ಕಾಂಗ್ರೇಸ್ ಸಮ್ಮಿಶ್ರ ಆಡಳಿತ ಇರುವ ಗುರುಪುರ ಪಂಚಾಯತ್ ನಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ವೇಳೆ ನೃತ್ಯದಲ್ಲಿ ವೀರ ಸಾವರ್ಕರ್ ಅವರ ಭಾವ ಚಿತ್ರ ಪ್ರದರ್ಶಿಸಿದ್ದನ್ನು, ಎಸ್ ಡಿ ಪಿ ಐ ಬೆಂಬಲಿತ ಪಂಚಾಯತ್ ಸದಸ್ಯರು ಆಕ್ಷೇಪಿಸಿ ಶಿಕ್ಷಕರಿಂದ ಕ್ಷಮೆ ಕೇಳಿಸಿದ್ದಾರೆ.
ಈ ಘಟನೆಗೆ ಬಿಜೆಪಿ ಬೆಂಬಲಿತ ಸದಸ್ಯರು ವಿರೋಧಿಸಿದ್ದು, ಸ್ಥಳಕ್ಕೆ ಬಜಪೆ ಪೋಲೀಸರು ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.