ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯ ಕಾರಣಕ್ಕೆ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ. ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ರೇಣಕಾಸ್ವಾಮಿ ಚಿಕ್ಕಪ್ಪ ಷಡಕ್ಷರಿ ಮಾತನಾಡಿದ್ದಾರೆ.
ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ, ಭರವಸೆ ಇದೆ. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ, ಚೇತರಿಸಿಕೊಳ್ಳಲಿ. ಎಸ್ಪಿಪಿ ಪ್ರಸನ್ನ ಕುಮಾರ್ ಉತ್ತಮವಾಗಿ ವಾದ ಮಂಡಿಸಿದ್ದಾರೆ. ಪಾಸ್ಪೋರ್ಟ್ ವಶಕ್ಕೆ ಪಡೆದು ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುವ ನಂಬಿಕೆ ನಮಗಿದೆ ಎಂದು ಭಾವುಕರಾಗಿದ್ದಾರೆ.