ಆತ್ಮರಕ್ಷಣೆಗಾಗಿ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಮನವಿ ಮಾಡಿದ ದರ್ಶನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ತೂಗುದೀಪ ಅವರು ತಮ್ಮ ಆತ್ಮರಕ್ಷಣೆಗಾಗಿ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಬೆಂಗಳೂರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೊಲೆ ಅರೋಪದಲ್ಲಿ ಬಂಧನವಾದಾಗಲೇ ನಟ ದರ್ಶನ್ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಗನ್ ಅನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದು, ಲೈಸೆನ್ಸ್ ರದ್ದು ಮಾಡಬೇಕೆಂಬ ನಿರ್ಧಾರ ತೆಗೆದುಕೊಂಡಿದ್ದರು.

ಕೊಲೆ ಆರೋಪಿ ದರ್ಶನ್ ಜೈಲಲ್ಲಿದ್ದ ಕಾರಣ ಈ ವಿಷಯ ಕೊಂಚ ನೆನೆಗುದಿಗೆ ಬಿದ್ದಿತ್ತು. ಈಗ ಅವರು ಜಾಮೀನು ಪಡೆದು ಹೊರಬಂದಿರುವ ಹಿನ್ನೆಲೆಯಲ್ಲಿ ತಮ್ಮ ಬಳಿಯಿರುವ ಗನ್ ಬಳಸಿ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು ಎಂದು ಜನವರಿ 7ರಂದು ದರ್ಶನ್ ಗೆ ಪೊಲೀಸರು ನೋಟೀಸೊಂದನ್ನು ನೀಡಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!