ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.
ಈ ಬಗ್ಗೆ ದರ್ಶನ್ ಮಾತನಾಡಿದ್ದು, ಪವನ್ನಿಂದ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿರೋದು ಗೊತ್ತಾಯ್ತು. ಅದಕ್ಕೆ ರೇಣುಕಾಸ್ವಾಮಿಯನ್ನು ಕರೆತರುವಂತೆ ರಾಘವೇಂದ್ರನಿಗೆ ಸೂಚಿಸಿದೆ. ಶನಿವಾರ ಸಂಜೆ ರೇಣುಕಾಸ್ವಾಮಿಯನ್ನು ಶೆಡ್ನಲ್ಲಿ ಭೇಟಿಯಾದೆ. ಇನ್ನೊಂದು ಸಲ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿದ್ರೆ ಸರಿ ಇರಲ್ಲ ಎಂದು ವಾರ್ನ್ ಮಾಡಿದೆ.
ದುಡ್ಡು ಕೊಟ್ಟು ಊಟ ಮಾಡ್ಕೊಂಡು ಊರು ಸೇರುವಂತೆ ಹೇಳಿ ಹೊರಟು ಹೋದೆ. ನಾನು ಈ ಕೊಲೆಯನ್ನು ಮಾಡಿಲ್ಲ. ನನಗೂ ಇದಕ್ಕೂ ಸಂಬಂಧವಿಲ್ಲ. ಯಾರು ಕೊಲೆ ಮಾಡಿದ್ದಾರೋ ಅಥವಾ ಹೊಡೆದಾಗ ಆತ ಸತ್ತುಹೋಗಿದ್ದಾನೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.