ದರ್ಶನ್‌ ನ್ಯಾಯಾಂಗ ಬಂಧನ ಇಂದೇ ಕೊನೆ, ಹೊರಗೆ ಬರ್ತಾರಾ? ಏನಾಗಲಿದೆ ಮುಂದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ದರ್ಶನ್ ಮತ್ತು ಗ್ಯಾಂಗ್​ಗೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳಲಿದೆ. ದರ್ಶನ್‌ ಹೊರಗೆ ಬರ್ತಾರಾ? ಏನಾಗಲಿದೆ ಮುಂದೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡುತ್ತಾ ಇದೆ.

ಇದು ಕಸ್ಟಡಿ ಅಂತ್ಯವಾಗುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿದ್ಧತೆ ಮಾಡಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ ಸಂಬಂಧ ನಟ ದರ್ಶನ್​​ ಮೂರು ಬಾರಿ ಪೊಲೀಸ್ ಕಸ್ಟಡಿಯಲ್ಲಿದ್ದರು. ಜೂನ್ 11 ರಂದು ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ದರ್ಶನ್​ರನ್ನು ಅರೆಸ್ಟ್ ಮಾಡಲಾಗಿತ್ತು. ಜೂನ್ 22 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇಂದು 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಗಿದಿದೆ.

ದರ್ಶನ್‌ಗೆ ಬೇಲ್‌ ಸಿಗುವ ಸಾಧ್ಯತೆ ಕಡಿಮೆ ಇದ್ದು, ಜಾಮೀನಿನ ಮೇಲೆ ಹೊರಗೆ ಕರೆಸಲು ದರ್ಶನ್‌ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!