ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಗೆ ಬೇಲ್ ಸಿಕ್ಕ ಹಿನ್ನೆಲೆ ವಿಜಯಲಕ್ಷ್ಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದೊಂದಿಗೆ ವಿಜಯಲಕ್ಷ್ಮಿ ಚಾಮುಂಡಿ ತಾಯಿಯ ದರುಶನ ಪಡೆದಿದ್ದಾರೆ. ಇ
ದರ್ಶನ್ ಹೊರತುಪಡಿಸಿ ಕುಟುಂಬ ಸಮೇತವಾಗಿ ತೆರಳಿದ್ದಾರೆ. ದಿನಕರ್, ಮೀನಾ ತೂಗುದೀಪ, ವಿಜಯಲಕ್ಷ್ಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸದ್ಯ ನಟ ಅವರ ಮೈಸೂರಿನ ತೋಟದಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇನ್ನೂ ದರ್ಶನ್ ನಟಿಸುತ್ತಿದ್ದ ‘ಡೆವಿಲ್’ (Devil) ಸಿನಿಮಾದ ಶೂಟಿಂಗ್ ಜ.20ರ ನಂತರ ಶುರುವಾಗಲಿದೆ ಎನ್ನಲಾಗಿದೆ.