ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್, ಸಚಿವ ಚಲುವರಾಯಸ್ವಾಮಿ ಮತ್ತು ರಾಜ್ಯದ ಅಪ್ ಮುಖಂಡ ಹಾಗೂ ಕನ್ನಡ ಪರ ಹೋರಾಟಗಾರ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವು ಸ್ಥಳೀಯ ಮುಖಂಡರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ಕೈಗೆ ಬೋಲ್ಟ್ ಗಳನ್ನು ಹಾಕಿಕೊಂಡೇ ಪ್ರಚಾರಕ್ಕೆ ಬಂದಿದ್ದ ದರ್ಶನ್, ಸ್ಟಾರ್ ಚಂದ್ರು ಅವರು ಸ್ಥಳೀಯರಾಗಿರುವ ಕಾರಣಕ್ಕೆ ಆದ್ಯತೆ ನೀಡಲೇಬೇಕು ಮತ್ತು ಅವರನ್ನು ಗೆಲ್ಲಿಸಿದರೆ ಈ ಭಾಗದ ಪ್ರಭಾವಿ ನಾಯಕ ಮತ್ತು ಸಚಿವರೂ ಆಗಿರುವ ಚಲುವರಾಯಸ್ವಾಮಿ ಅವರ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.