ದಾವಣಗೆರೆ | ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಹೊಸದಿಗಂತ ವರದಿ, ದಾವಣಗೆರೆ:

ಜಮೀನಿನ ಪಂಪ್ ಸೆಟ್ ಮೋಟಾರ್ ಆನ್ ಮಾಡಲು ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಶ್ಯಾಗಲೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೇವಣಸಿದ್ದಪ್ಪ (19 ವರ್ಷ) ಮೃತ ಯುವಕ. ರೇವಣಸಿದ್ದಪ್ಪ ತೋಟದಲ್ಲಿರುವ ಪಂಪ್ ಸೆಟ್ ಮೋಟಾರ್ ಆನ್ ಮಾಡಲು ಹೋಗಿದ್ದ ಈ ವೇಳೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದಾವಣಗೆರೆ ಸುತ್ತಮುತ್ತ ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ನೆಲ ತೇವಗೊಂಡು ವಿದ್ಯುತ್ ಪ್ರವಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!