ಹೊಸದಿಗಂತ ಅಂಕೋಲಾ:
ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತದ ಘಟನೆಯಿಂದಾಗಿ ವಾಹನಗಳು ಮತ್ತು ಜನರ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ನಡುವೆ ಸಂಚಾರ ಆರಂಭಿಸಲು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅನುಮತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸುರಕ್ಷತೆಗೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲಾಗಿದ್ದು ಒಂದು ಬದಿಯ ರಸ್ತೆಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಎರಡು ಭಾಗಗಳಲ್ಲಿ ಎಚ್ಚರಿಕೆ ನೀಡುವ ಸೂಚನಾ ಫಲಕಗಳನ್ನು ಅಳುವಡಿಸುವಂತೆ ಸೂಚಿಸಲಾಗಿದ್ದು ಗುಡ್ಡ ಕುಸಿತ ಪ್ರದೇಶದಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಿ ಗಂಗಾವಳಿ ನದಿಯ ಅಂಚಿನ ಉದ್ದಕ್ಕೂ ಸುರಕ್ಷತಾ ಬ್ಯಾರಿಕಾಡ್ ಅಳವಡಿಸುವಂತೆ ತಿಳಿಸಲಾಗಿದೆ.
ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನಗಳ ಸಂಚಾರ 20 ಕಿ.ಮೀ ವೇಗದಲ್ಲಿ ಮಾತ್ರ ಇರಬೇಕು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿ ಐ ಆರ್ ಬಿ ವತಿಯಿಂದ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.