ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರಿಲ್ಲ, ನೀರಿಲ್ಲ, ಬೆಂಗಳೂರಿನಲ್ಲಿ ನೀರಿಲ್ಲ.. ಹೌದು, ಇಡೀ ಬೆಂಗಳೂರಿನಲ್ಲಿ ಯಾವುದಕ್ಕೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ.
ಜನರಿಗೆ ನೀರಿನ ಮೌಲ್ಯ ತಿಳಿಸಲು ನೀರು ಉಳಿಸಿ ಬೆಂಗಳೂರು ಅಭಿಯಾನ ಆರಂಭವಾಗಿದೆ. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.
ಬೆಂಗಳೂರಿಗರು ನಿಜಕ್ಕೂ ಸಂಕಷ್ಟದಲ್ಲಿದ್ದಾರೆ. ಈಗಾಗಲೇ 6,900 ಬೋರ್ವೆಲ್ಗಳು ಬತ್ತಿ ಹೋಗಿದ್ದು, ಬರೀ 9,000 ಬೋರ್ವೆಲ್ ಮಾತ್ರ ಚಾಲ್ತಿಯಲ್ಲಿದೆ. ಹೊಸ ಬೋರ್ವೆಲ್ ಕೊರೆಯಲು ಅನುಮತಿ ನೀಡುತ್ತಿದ್ದೇವೆ. ಮುಂದಿನ ಪೀಳಿಗೆಗೆ ನೀರು ನೀಡಲು ನಾವು ಈಗಲೇ ಜಾಗರೂಕರಾಗಿ ನೀರನ್ನು ಉಳಿಸಬೇಕಿದೆ ಎಂದಿದ್ದಾರೆ.