ಡಿಸಿಎಂ ಡಿ.ಕೆ. ಶಿವಕುಮಾರ ಯಾವ ಕಾಲಕ್ಕೂ ಮುಖ್ಯಮಂತ್ರಿ ಆಗಲ್ಲ: ಶಾಸಕ ಯತ್ನಾಳ

ಹೊಸದಿಗಂತ ವರದಿ ವಿಜಯಪುರ:

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವ ಕಾಲಕ್ಕೂ ಮುಖ್ಯಮಂತ್ರಿ ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಸದ್ಯ ಸೂಪರ್ ಮುಖ್ಯಮಂತ್ರಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತುಂಬಾ ನೋವಿದೆ ಎಂದರು.

ಸಿದ್ದರಾಮಯ್ಯ ಅವರೇನೆ ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿ. ಸದ್ಯ ಸುಮ್ಮನೆ ಮುಖ್ಯಮಂತ್ರಿ ಹುದ್ದೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಆದರೆ, ಆಡಳಿತ ಮಾತ್ರ ಡಿ‌.ಕೆ. ಶಿವಕುಮಾರ್‌ ಮಾಡುತ್ತಿದ್ದಾರೆ. ಆರು ತಿಂಗಳು ಆಗಲಿ ಐದು ವರ್ಷ ಆಗಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!