ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯ ಸಮಸ್ಯೆಯಿಂದಾಗಿ ಕೆಲವು ದಿನಗಳ ಕಾಲ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೋಮವಾರ ಮತ್ತೆ ತಮ್ಮ ಅಧಿಕೃತ ಕರ್ತವ್ಯಕ್ಕೆ ಮರಳಿದ್ದಾರೆ. ವಿಶ್ರಾಂತಿಯ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಅವರು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.
ಕಂದಾಯ ಇಲಾಖೆಗೆ ವೇಗ ನೀಡಲು ಸೂಚನೆ
ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪರಮೇಶ್ವರ್, ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು. ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಡ್ತಿ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ರೈತ ಸಂಪರ್ಕದ ಅಧಿಕಾರಿಗಳಿಗೆ ಹೆಚ್ಚಿನ ಆದ್ಯತೆ
ತಳಮಟ್ಟದಲ್ಲಿ ಜನರೊಂದಿಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅವರು ಸೂಚಿಸಿದರು. ಪರವಾನಗಿ ಪಡೆದ ಸರ್ವೇಯರ್ಗಳ ಸಮಸ್ಯೆಗಳ ಕುರಿತು ವಿಶೇಷ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಾಕಿ ಕಡತಗಳ ವಿಲೇವಾರಿಗೆ ಒತ್ತು
ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಪರಮೇಶ್ವರ್ ಸೂಚಿಸಿದರು. ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಿಸಲು ಅಧಿಕಾರಿಗಳು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸುವಂತೆ ಹಾಗೂ ಗುರಿ ಸಾಧನೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.



