ಹೊಸದಿಗಂತ ವರದಿ ಮಡಿಕೇರಿ:
ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮಡಿಕೇರಿಯ ಹಳೆಯ ದರ್ಬಾರ್ ಹೊಟೆಲ್ ಕಟ್ಟಡದಲ್ಲಿ ಸುಮಾರು 60ರ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತರನ್ನು ಮಡಿಕೇರಿಯಲ್ಲಿ ಬಸ್ ಚಾಲಕರಾಗಿದ್ದ ನಾರಾಯಣ ಎಂದು ಗುರುತಿಸಲಾಗಿದೆ.
ತಡರಾತ್ರಿ ಮೂತ್ರಬಾಧೆ ತೀರಿಸಲು ಹೋದಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಮಡಿಕೇರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.