ಮಡಿಕೇರಿಯ ರಾಜಕಾಲುವೆಯಲ್ಲಿ ಮೃತದೇಹ ಪತ್ತೆ

ದಿಗಂತ ವರದಿ ಮಡಿಕೇರಿ:

ನಗರದ ರಾಜಕಾಲುವೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತರನ್ನು ನಗರದ ಹೊಸ ಬಡಾವಣೆ ನಿವಾಸಿ ಕೃಷ್ಣ(75) ಎಂದು ಗುರುತಿಸಲಾಗಿದೆ.
ಕೃಷ್ಣ ಅವರು ನಗರದ ಗ್ಯಾರೇಜ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಶನಿವಾರದಿಂದ ಅವರು ಕಾಣೆಯಾಗಿದ್ದರು. ಭಾನುವಾರ ಬೆಳಗ್ಗೆ ಅವರ ಮೃತದೇಹ ನಗರದ ಎಲ್‌ಐಸಿ ಬಳಿಯ ರಾಜ ಕಾಲುವೆಯಲ್ಲಿ ಪತ್ತೆಯಾಗಿದೆ. ರಾಜಕಾಲುವೆ ಬಳಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಕುಡಿತದ ಮತ್ತಿನಲ್ಲಿ ಅವರು ಆಯತಪ್ಪಿ ಕಾಲುವೆಗೆ ಬಿದ್ದು ಸಾವಿಗೀಡಾಗಿರಬಹುದೆಂದು ಶಂಕಿಸಲಾಗಿದೆ.
ಸ್ಥಳಕ್ಕೆ ನಗರ ಪೊಲೀಸರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!