ಮಡಿಕೇರಿಯ ಕಾಫಿತೋಟದಲ್ಲಿ ಕಾಡಾನೆ ಮೃತದೇಹ, ಸಾವಿಗೆ ಕಾರಣ ಏನು?

ದಿಗಂತ ವರದಿ ಮಡಿಕೇರಿ:

ಆಹಾರ ಅರಸಿ ಬಂದ ಕಾಡಾನೆಯೊಂದು ಕಾಫಿ ತೋಟದೊಳಗೆ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವುದು ಕಂಡು ಬಂದಿದೆ.

ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದ ಹುಂಡಿ ಎಂಬಲ್ಲಿ ಮಕ್ನಾ ಆನೆಯ ಮೃತದೇಹ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಾಡಿನಿಂದ ಆಹಾರ ಆರಿಸಿ ಕಾಫಿ ತೋಟಕ್ಕೆ ಬಂದಿರುವ ಕಾಡಾನೆ ಉಸಿರು ಚೆಲ್ಲಿದ್ದು,ಮರಣೋತ್ತರ ಪರೀಕ್ಷೆಯ ಬಳಿಕ ಆನೆಯ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಹುಂಡಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಹಾಡಹಗಲಿನಲ್ಲೂ ಕಾಣಿಸಿಕೊಳ್ಳುತ್ತಿವೆ. ಇದರಿಂದಾಗಿ‌ ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಜೀವಭಯದಿಂದಲೇ ಸಂಚರಿಸುವಂತಾಗಿದೆ. ಕಾಡಾನೆ ಹಾವಳಿಯ ಶಾಶ್ವತ ತಡೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!