ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ತಾಲೂಕಿನಲ್ಲಿ ಬಾಡಿಗೆ ಮನೆಯೊಂದರ ಒಳಗೆ ಮಹಿಳೆಯ ಮೃತದೇಹ ಗೋಣಿ ಚೀಲದಲ್ಲಿ ತುಂಬಿಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇಲ್ಲಿನ ಹೊಟೇಲ್ ನಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಲದ ಮೂಲದ ಇಮ್ರಾನ್ ಪಾಶಾ ಎಂಬಾತ ತನ್ನ ಪತ್ನಿಯನ್ನು ಕೊಲೆಗೈದು ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದಾನೆಂದು ಶಂಕಿಸಲಾಗಿದೆ.
ಕೆಲ ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ತನ್ನ ಪತ್ನಿಯೊಂದಿಗೆ ವಾಸಿಸುತ್ತಿದ್ದ ಇಮ್ರಾನ್ ಭಾನುವಾರ ಊರಿಗೆ ಹೋಗುತ್ತಿದ್ದೇನೆ ಎಂದು ಹೊಟೇಲ್ ಅವರಲ್ಲಿ ಹೇಳಿ ರಜೆ ಮಾಡಿ ತೆರಳಿದ್ದನು.
ಮಂಗಳವಾರ ಮಧ್ಯಾಹ್ನ ವೇಳೆ ಅವರ ಬಾಡಿಗೆ ಮನೆ ಪಕ್ಕದ ರೂಮಿನವರಿಗೆ ಸಂದೇಹ ಬಂದು ಹೊಟೇಲ್ ಮಾಲೀಕರಿಗೆ ಮಾಹಿತಿ ನೀಡಿದ್ದರು.ಬಳಿಕ ಮಾಲಕರು ಪೋಲಿಸರಿಗೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮೃತದೇಹ ಪತ್ತೆಯಾಗಿದೆ.
ಸುಳ್ಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.