ಹೊಸದಿಗಂತ ಕಾರವಾರ:
ವಾಯು ವಿಹಾರಕ್ಕೆ ಹೊರಟಿದ್ದ ನಗರಸಭೆ ಮಾಜಿ ಸದಸ್ಯ ಸತೀಶ ಕೊಳಂಬಕರ (62) ಅವರನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಇಲ್ಲಿಯ ಸಂತೆ ಮಾರುಕಟ್ಟೆಯಲ್ಲಿ ನಸುಕಿನ ಜಾವ ನಡೆದಿದೆ.
ಬೈಕ್ ಮೇಲೆ ಬಂದಿದ್ದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಸತೀಶ ಅವರ ಎದೆಗೆ ಇರಿದು ಹತ್ಯೆ ಮಾಡಿದ್ದಾರೆ.
ವ್ಯಾವಹಾರಿಕ ವಿಚಾರದ ದ್ವೇಷದಿಂದ ಸತೀಶ ಅವರನ್ನು ಹತ್ಯೆ ಮಾಡಿರುವ ಶಂಕೆ ಇದೆ. ಅವರ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ 8ಕ್ಕೂ ಹೆಚ್ಚು ಪ್ರಕರಗಳಿದ್ದು ಅವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಲಾಗಿತ್ತು.
ಹತ್ತು ದಿನಗಳ ಹಿಂದೆ ನಗರದ ಹೊಟೆಲ್ ಒಂದರಲ್ಲಿ ಹಣಕಾಸಿನ ವಿಚಾರಕ್ಕೆ ಸತೀಶ ಮೇಲೆ ಹಲ್ಲೆ ನಡೆದಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ಹತ್ಯೆ ನಡೆಸಿದ ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದರು.