ತುಮಕೂರಿನ ಗುಪ್ತ ವಾರ್ತೆ ಸಹಾಯಕ ನಿರ್ದೇಶಕ ಶಿವಕುಮಾರ್ ನಿಧನ

ಹೊಸದಿಗಂತ ವರದಿ ತುಮಕೂರು:‌ 

ತುಮಕೂರು ಜಿಲ್ಲೆಯ ರಾಜ್ಯ ಗುಪ್ತ ವಾರ್ತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಎಸ್.ಎಂ. ಶಿವಕುಮಾರ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ತುಮಕೂರಿನ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿ 2020 ಡಿಸೆಂಬರ್ 2ರಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.

ಏಪ್ರಿಲ್‌ 29 ಶುಕ್ರವಾರ ತುಮಕೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯ ಸರ್ವಜ್ಞ ಬ್ಲಾಕ್ ಮನೆ ನಂಬರ್ 6 ರ ಪೊಲೀಸ್ ವಸತಿಗೃಹದಲ್ಲಿ ಹೃದಯಾಘಾತದಿಂದ ರಾತ್ರಿ ಒಂದು ಗಂಟೆಗೆ ಮೃತಪಟ್ಟಿರುತ್ತಾರೆ. ಮೃತರು ಪತ್ನಿ ವಿಜಯಲಕ್ಷ್ಮಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಅವರ ಸ್ವಂತ ಊರು ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕ ಬನಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಜಿಲ್ಲಾ ಗುಪ್ತ ವಾರ್ತೆ ಸಿಬ್ಬಂದಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯವರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!