ಎಸ್.ಎಂ ಕೃಷ್ಣ ನಿಧನ: ನಾಳೆ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರಕಾರ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ.

ಈ ಸಂಬಂಧ ಕಚೇರಿ ಆದೇಶವನ್ನು ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ದಿನಾಂಕ 10.12.2024ರಂತೆ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ರವರ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಪ್ರಕಟಿಸಿದೆ ಎಂದಿದೆ.

ಗೌರವಾರ್ಥವಾಗಿ 11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು 11.12.2024ರ ಬುಧವಾರದಂದು ರಜೆಯನ್ನು ಘೋಷಿಸಿದೆ ಎಂದು ತಿಳಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!