ಹೊಸದಿಗಂತ ವರದಿ, ವಿಜಯಪುರ:
ನೀರಿನ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಿಶ್ಯಾಳ ಪಿ ಬಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ರಮೇಶ (7), ಮಾಳಿಂಗರಾಯ (11) ಸಾವಿಗೀಡಾದ ಬಾಲಕರು.
ಈ ಇಬ್ಬರು ಬಾಲಕರು ಕೃಷಿ ಹೊಂಡದ ಹತ್ತಿರ ದನ ಮೇಯಿಸಲು ಹೋಗಿದ್ದ ವೇಳೆ, ನೀರು ಕುಡಿಯಲೆಂದು ಹೋದಾಗ ಕಾಲು ಜಾರಿ ಬಿದ್ದು, ಸಾವಿಗೀಡಾಗಿದ್ದಾರೆ.
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.