Saturday, December 9, 2023

Latest Posts

ಕರ್ನಾಟಕ ಹೈಕೋರ್ಟ್​ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ಹೈಕೋರ್ಟ್​ನ (Karnataka High Court) 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ (Death Threat) ಸಂದೇಶ ಬಂದಿದೆ.

ಹೈಕೋರ್ಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ. ಮುರಳೀದರ್ ಗೆ ಸಂದೇಶ ಬಂದಿದ್ದು, 50 ಲಕ್ಷ ರೂ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ.

ಪಾಕಿಸ್ತಾನ ಮೂಲದ ಬ್ಯಾಂಕ್​ ಖಾತೆ ನಂಬರ್ ನೀಡಿದ್ದಾರೆ. ಅಲೈಡ್​​ ಬ್ಯಾಂಕ್ ಲಿಮಿಟೆಡ್​ನ‌ ಖಾತೆಯ ಸಂಖ್ಯೆಯನ್ನು ದುಷ್ಕರ್ಮಿಗಳು ನೀಡಿದ್ದಾರೆ. ಕೊಲೆ ಮಾಡಿಸುವುದಾಗಿ ವಾಟ್ಸ್​ಆ್ಯಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಬೆದರಿಕೆ ಸಂಬಂಧ ಸೆಂಟ್ರಲ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ವಾಟ್ಸ್​ಆ್ಯಪ್ ಸಂದೇಶದ ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!