ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್ನ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಇಲ್ಲಿಯವರೆಗೆ 22 ಮಂದಿ ಮೃತಪಟ್ಟಿದ್ದಾರೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ಒಟ್ಟು 22 ಜನ ಸಾವನ್ನಪ್ಪಿದ್ದಾರೆ. ಇನ್ನೂ 86 ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಯಗಢ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, 48 ಕುಟುಂಬಗಳ 229 ಜನರಲ್ಲಿ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. 111 ಮಂದಿ ಸುರಕ್ಷಿತವಾಗಿದ್ದಾರೆ, 86 ಜನರನ್ನು ಇನ್ನೂ ಪತ್ತೆ ಮಾಡಬೇಕಿದೆ ಎಂದು ಹೇಳಿದೆ.
ಘಟನೆಯಲ್ಲಿ ಗಾಯಗೊಂಡಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.