ನಮ್ಮ ಯೋಧರ ಬಲಿದಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ- ಮನೋಜ್ ಸಿನ್ಹಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‌ಕೌಂಟರ್ ದಾಳಿಯಲ್ಲಿ, ಇಬ್ಬರು ಹಿರಿಯ ಅಧಿಕಾರಿಗಳು ಸೇರಿದಂತೆ ಸೈನಿಕರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳದೇ ಬಿಡುವ ಮಾತೇ ಇಲ್ಲ ಎಂದು ಜೆ-ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದರು.

ಶ್ರೀನಗರದ ಎಸ್‌ಕೆಐಸಿಸಿಯಲ್ಲಿ ನಡೆದ ‘ಹಮ್ ಸಬ್ ಏಕ್ ಹೈ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್-ಜಿ, ತಮ್ಮ ಆಡಳಿತವು ಈ ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ. ಅದರಂತೆ ಜಮ್ಮು ಮತ್ತು ಕಾಶ್ಮೀರದ ಜನರು ಸಹ ಭಯೋತ್ಪಾದನೆಯನ್ನು ತೊಡೆದುಹಾಕಲು ಬಯಸುತ್ತಾರೆ ಎಂಬುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಇಡೀ ದೇಶ ಇಂದು ನಮ್ಮ ವೀರ ಯೋಧರೊಂದಿಗೆ ನಿಂತಿದೆ. ಶಾಂತಿ ಕದಡುವ ಯಾರನ್ನೂ ಸುಮ್ಮನೆ ಬಿಡಲಾಗುವುದಿಲ್ಲ ಎಂದರು.

ನಾವೆಲ್ಲರೂ ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಸೋಲಿಸಲು ಮತ್ತು ಭದ್ರತೆಗೆ ಸವಾಲುಗಳನ್ನು ಎದುರಿಸಲು ಪ್ರತಿಜ್ಞೆ ತೆಗೆದುಕೊಳ್ಳಬೇಕು. ಅಭಿವೃದ್ಧಿ ಹೊಂದಿದ ಭಾರತವನ್ನು ರಚಿಸಲು ಈ ಪ್ರದೇಶದ ಕೊಡುಗೆ ಯಾವುದೇ ರಾಜ್ಯಕ್ಕಿಂತ ಕಡಿಮೆಯಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!