ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​ಗೆ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಹವಣಿಸುತ್ತಿದೆ. ಇದಕ್ಕಾಗಿಯೇ ಭರ್ಜರಿ ತಾಲೀಮು ನಡೆಸಿದೆ.

ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​ ಡ್ರಿಲ್​​ ಮಾಡಲು ನಿರ್ಧರಿಸಲಾಗಿದೆ.

ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದಿದ್ದಾರೆ.

ಮಾಕ್​ಡ್ರಿಲ್​ನಲ್ಲಿ ಎನ್​​ಸಿಸಿ, ಎನ್​​ಎಸ್​​ಎಸ್​, ಸಿವಿಲ್‌ ಡಿಫೆನ್ಸ್ ಮತ್ತು ವೈದ್ಯರು ಭಾಗಿಯಾಗುತ್ತಾರೆ. ಪೊಲೀಸ್ ಠಾಣೆ, ಅಗ್ನಿಶಾಮಕ ದಳ ಠಾಣೆ ಸೇರಿ 35 ಕಡೆ ಸೈರನ್​ ಇದೆ, ಅದರಲ್ಲಿ 32 ಕಾರ್ಯ ನಿರ್ವಹಿಸುತ್ತಿವೆ. ಜನರು ಏನು ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!