ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಫೆಬ್ರವರಿ 28, ಮಾರ್ಚ್ 1 ಮತ್ತು 2 ರಂದು ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜನೆಯಾಗಿದೆ. ಪುಸ್ತಕ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಅಲ್ಲದೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಪುಸ್ತಕ ಖರೀದಿ ಮಾಡಿ ಸರ್ಕಾರಿ ಕಾಲೇಜು, ಪ್ರೌಢಶಾಲೆಗಳಿಗೆ ನೀಡಲು ಅವಕಾಶ ಇದೆ. ಮಾರ್ಚ್ 3 ರಂದು ಜಂಟಿ ಅಧಿವೇಶನ ನಡೆಯಲಿದೆ. ಅಂದು ರಾಜ್ಯಪಾಲರ ಭಾಷಣ ಇರೋದ್ರಿಂದ ಮಧ್ಯಾಹ್ನದ ಬಳಿಕ ಪುಸ್ತಕ ಮೇಳಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.