ರಾಜ್ಯದಲ್ಲಿ 1500ಕ್ಕೂ ಹೆಚ್ಚು ಬಸ್ ಖರೀದಿಗೆ ನಿರ್ಧಾರ: ಸಚಿವ ಬಿ. ಶ್ರೀರಾಮುಲು

ಹೊಸದಿಗಂತ ವರದಿ, ಕಲಬುರಗಿ:

ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷು ಉತ್ತಮಪಡಿಸಲು ಬಿ.ಎಸ್-6 ಮಾದರಿಯ 665 ಮತ್ತು 900 ಎಲೆಕ್ಟ್ರಿಕ್ ಬಸ್ ಸೇರಿ 1500ಕ್ಕೂ ಹೆಚ್ಚು ಬಸ್‍ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಸಾರಿಗೆ ಮತ್ತು ಪರಿಶಿಷ್ಡ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ 9-10 ವರ್ಷದಿಂದ ಬಸ್‍ಗಳು ಓಡುತ್ತಿದ್ದು ಹಳೆಯದಾಗಿವೆ. ಹೀಗಾಗಿ ಹೊಸದಾಗಿ ಬಸ್ ಖರೀದಿಗೆ ನಿರ್ಧರಿಸಿದೆ ಎಂದರು.

ಸಾರಿಗೆ ಇಲಾಖೆಯಲ್ಲಿ 635ರಲ್ಲಿ 165 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ. 8500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಇದರ ಮಧ್ಯೆ ಆರ್.ಟಿ.ಓ. ಕಚೇರಿಯಲ್ಲಿ ಕಲಿಕಾ ಪರವಾನಿಗೆ, ನವೀಕರಣ ಹೀಗೆ 30 ಸೇವೆಗಳನ್ನು ಆನ್‍ಲೈನ್ ಮೂಲಕ ವ್ಯವಹರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಯಲ್ಲಿ ಕುಳಿತು ಆನ್‍ಲೈನ್ ಮೂಲಕ ಸೇವೆ ಪಡೆಯಬಹುದಾಗಿದೆ. ಇಂತಹ ಸುಧಾರಣಾ ಕ್ರಮ ತಮದಿರುವುದಕ್ಕೆ ತಮಗೆ ತೃಪ್ತಿ ಇದೆ ಎಂದು ಸಚಿವರು ಹೇಳಿದರು.

ಸಾರಿಗೆ ನೌಕಕರ ವೇತನ ಪರಿಷ್ಕರಣೆ ಕುರಿತಂತೆ ಮಾತನಾಡಿದ ಸಚಿವರು, ನೌಕರರ ಬಹುದಿನಗಳ ಬೇಡಿಕೆ ಇದಾಗಿದೆ. ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದು, ಅವರು ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದ ಸಚಿವರು ಹಳದಿ ಬೋರ್ಡ್ ವುಳ್ಳ ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಖ್ಯಮಂತ್ರಿಗಳ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ವಿಧಾನ ಪರಿಷತ್ ಶಾಸಕರಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!