ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಮುಖಗೊಂಡ ಮಳೆ: ನಾಳೆ ಶಾಲೆಯ ಕಥೆಯೇನು?

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್ ಆಗಿದ್ದ ಶಾಲೆಗಳು ಮಂಗಳವಾರ ಪುನರಾರಂಭಗೊಳ್ಳಲಿವೆ.
ಸೋಮವಾರ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ವಾಪಸ್ ಪಡೆದು ಜು.16 ರಂದು ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಯಾವುದೇ ಸಮಸ್ಯೆ ಇದ್ದಲ್ಲಿ ಡಿಡಿಪಿಐ, ಜಿಪಂ ಸಿಇಒ, ಜಿಲ್ಲಾಧಿಕಾರಿ ಕಚೇರಿ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!