ಜಿಂಕೆ ಚರ್ಮ ಮಾರಾಟ ಯತ್ನ: ಓರ್ವನ ಬಂಧನ

ಹೊಸದಿಗಂತ ವರದಿ, ಮಡಿಕೇರಿ:

ಅಕ್ರಮವಾಗಿ ಜಿಂಕೆ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.
ಆರೋಪಿ ಬಳಿಯಿಂದ ಒಂದು ಜಿಂಕೆ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ.
ಮಡಿಕೇರಿಯ ಸುದರ್ಶನ ವೃತ್ತದಿಂದ ಸಿದ್ದಾಪುರ ಮಾರ್ಗಕ್ಕೆ ತೆರಳುವ ರಸ್ತೆಯಲ್ಲಿರುವ ಬಸ್ ತಂಗುದಾಣದ ಬಳಿ ವ್ಯಕ್ತಿಯೊಬ್ಬ ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಅರಿತು ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ನಂಜನಗೂಡು ಮೂಲದ ವೆಂಕಟೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‍ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ ಹೆಡ್‍ಕಾನ್ಸ್ಟೇಬಲ್‍ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್‌ಟೇಬಲ್ ಸ್ವಾಮಿ, ಮಂಜುನಾಥ ಅವರುಗಳು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!