ಹೊಸ ದಿಗಂತ ಡಿಜಿಟಲ್ ಡೆಸ್ಕ್
ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವ ಮುನಿರತ್ನ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿಸೆಂಬರ್ 24) ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣರನ್ನು ಬಂಧಿಸಿದ್ದಾರೆ.
ಕೆಂಪಣ್ಣ ಅವರುಸಚಿವ ಮುನಿರತ್ನ ಅವರ ವಿರುದ್ಧ ಬಹಿರಂಗವಾಗಿಯೇ ಕಮಿಷನ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರು ಕೆಂಪಣ್ಣ ಮಾನಹಾನಿ ಕೇಸ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಣ್ಣ ಅವರು ಕೋರ್ಟ್ಗೆ ಗೈರಾಗಿದ್ದಕ್ಕೆ ಜಾಮೀನು ರಹಿ ವಾರೆಂಟ್ ಜಾರಿಯಾಗಿತ್ತು.