ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರೋ ಹಾಗೇ ಮಾಡ್ತಿದ್ದಾರೆ. ಹೀಗಿರುವಾಗ ಸುಮ್ಮನೆ ಇರೋದಕ್ಕೆ ಸಾಧ್ಯನಾ? ಹೀಗಾಗಿ ಕೇಸ್ ಹಾಕಲಾಗಿದೆ ಎಂದರು.
ಬಿಜೆಪಿ ಸರ್ಕಾರ ಇದ್ದಾಗ 40% ಕಮಿಷನ್ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿತ್ತು. ಆಗ ನೀವು ಮಾಡಿದ್ದು ಸುಳ್ಳು ಆರೋಪ ಅಲ್ವಾ ಎಂಬ ಪ್ರಶ್ನೆ. ವಿಪಕ್ಷ ಇದ್ದಾಗ ನಾವು ಮಾಡಿದ ಆರೋಪಗಳಿಗೆ ಅವರು ಕೇಸ್ ಹಾಕಿಲ್ಲ ಅಂದರೆ ಅದರ ಬಗ್ಗೆ ನಮಗೆ ಗೊತ್ತಿಲ್ಲ. ಕೇಸ್ ಹಾಕೋದು ಬಿಡೋದು ಅವರಿಗೆ ಬಿಟ್ಟಿದ್ದು. ನಮ್ಮ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಅದಕ್ಕೆ ನಾವು ಕೇಸ್ ಹಾಕಿದ್ದೇವೆ ಎಂದು ಹೇಳಿದರು.