ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇನ್ನೊಬ್ಬರ ಮಾನಹಾನಿ ಮಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಶಿರಭಾಗ ಇಲ್ಲದ ಚಿತ್ರ ಹಾಕಿ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು, ಹಾಗೂ ಬಳಿಕ ಅದನ್ನು ಹಿಂಪಡೆದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಮಾಧ್ಯಮದಲ್ಲಿ ಇಂತಹಾ ಮಾನಹಾನಿ ಸರಿಯಲ್ಲ. ಅದು ಪ್ರಧಾನಿ ನರೇಂದ್ರ ಮೋದಿಯವರದ್ದೇ ಆಗಲಿ, ಇತರರದ್ದೇ ಆಗಲಿ, ಯಾರೇ ಆದರೂ ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇನ್ನೊಬ್ಬರ ಮಾನಹಾನಿ ಮಾಡಬಾರದು ಎಂದು ಪ್ರತಿಕ್ರಿಯಿಸಿದರು.