ಕಾಂಗ್ರೆಸ್ ಗೆ ಸೋಲಿನ ಬರೆ: ಇಂದು ಸಂಜೆ ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜೀನಾಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಗೆದ್ದು ಬೀಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್​​ ಜಯ ಸಾಧಿಸಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿತ್ತು. ಆದರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ. ಇಂದು ಸಂಜೆ 5.30ಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ ಸಲ್ಲಿಸಲಿದ್ದಾರೆ.

ಅಧಿಕಾರದಲ್ಲಿರುವ ಪಕ್ಷ ಚುನಾವಣೆ ಸೋಲು ಅನುಭವಿಸುತ್ತಿದ್ದಂತೆ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಸರ್ಕಾರ ರಚನೆಗೆ ಅನುವು ಮಾಡಿಕೊಡುತ್ತಾರೆ. ಇದರಂತೆ ಅಶೋಕ್ ಗೆಹ್ಲೋಟ್ ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ರಾಜಸ್ಥಾನ ರಾಜ್ಯಪಾಲ ಕಾಲ್ರಾಜ್ ಮಿಶ್ರಾ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಹೊಸ ಸರ್ಕಾರ ರಚನೆ ಆಗುವ ವರೆಗೆ ಅಶೋಕ್ ಗೆಹ್ಲೋಟ್ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನ ಗೆಲ್ಲುವ ಮೂಲಕ ಅಭೂತಪೂರ್ವ ಗೆಲುವು ದಾಖಲಿಸಿದೆ. ಕಾಂಗ್ರೆಸ್ 70 ಸ್ಥಾನಕ್ಕೆ ಕುಸಿದಿದೆ. ಇನ್ನು ಬಿಎಸ್‌ಪಿ 2 ಸ್ಥಾನಕ್ಕೆ ಕುಸಿದಿದ್ದರೆ, ಇತರರು 14 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ರಾಜಸ್ಥಾನ ಚುನಾವಣಾ ಮತಎಣಿಕೆ ಬಹುತೇಕ ಪೂರ್ಣಗೊಂಡಿದೆ. ಶೀಘ್ರದಲ್ಲೇ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!