ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಸೈನಿಕರಿಗೆ ಗೌರವ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರ ರಾಜಧಾನಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದ ವೀರರಿಗೆ ಪುಷ್ಪ ನಮನ ಸಲ್ಲಿಸಿದರು.

ರಕ್ಷಣಾ ಸಚಿವರು 1999 ರ ಯುದ್ಧದಲ್ಲಿ ವೀರಾವೇಶದಿಂದ ಹೋರಾಡಿದ ವೀರ ಸೈನಿಕರ ಅದಮ್ಯ ಮನೋಭಾವ ಮತ್ತು ಧೈರ್ಯವನ್ನು ಸ್ಮರಿಸಿದರು ಮತ್ತು ಸಶಸ್ತ್ರ ಪಡೆಗಳ ಸೇವೆ ಮತ್ತು ತ್ಯಾಗವು “ಪ್ರತಿಯೊಬ್ಬ ಭಾರತೀಯ” ಮತ್ತು ನಮ್ಮ “ಮುಂಬರುವ ಪೀಳಿಗೆಗೆ” ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.

ಇದಕ್ಕೂ ಮುನ್ನ ಕಾರ್ಗಿಲ್ ಯುದ್ಧ ವೀರ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ತಂದೆ ಜಿಎಲ್ ಬಾತ್ರಾ ಅವರು 1999 ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಹೆಡ್ ಕ್ವಾರ್ಟರ್ಸ್ ವೆಸ್ಟರ್ನ್ ಕಮಾಂಡ್ ನಲ್ಲಿ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!