ಆಂಬ್ಯುಲೆನ್ಸ್ ಬಾಗಿಲು ತೆರೆಯಲು ತಡ: ಉಳಿಯಲಿಲ್ಲ ಗಾಯಾಳು ಪ್ರಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಬ್ಯುಲೆನ್ಸ್ ಬಾಗಿಲು ತೆರೆಯಲು ತಡವಾದ ಪರಿಣಾಮ ಗಾಯಾಳು ಸಾವನ್ನಪ್ಪಿದ ಘಟನೆ ಕೆರಳದ ಕೋಯಿಕ್ಕೋಡ್ ನಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್​ನಲ್ಲಿ ಸೋಮವಾರ ಸಂಜೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಬಾಗಿಲು ತೆಗೆಯಲು ಆಗದೇ ಅರ್ಧಗಂಟೆ ತಡವಾದ ಕಾರಣ ಆಂಬ್ಯುಲೆನ್ಸ್​​ನಲ್ಲೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಕರುವಂತುರುತಿ ಮೂಲದ ಫಿರೋಕ್‌ನ ಕೋಯಾಮೋನ್(66) ಎಂದು ಗುರುತಿಸಲಾಗಿದೆ.
ಸ್ಕೂಟರ್ ಡಿಕ್ಕಿ ಹೊಡೆದು ಕೋಯಾಮೋನ್ ಅವರನ್ನು ಬೀಚ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಾಯ ಗಂಭೀರವಾಗಿದ್ದರಿಂದ ವೈದ್ಯರ ಸಲಹೆಯಂತೆ ಆಂಬ್ಯುಲೆನ್ಸ್‌ನಲ್ಲಿ ಕೋಯಮನ್‌ರನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಮೆಡಿಕಲ್ ಕಾಲೇಜು ತಲುಪಿ ಅರ್ಧ ಗಂಟೆ ಕಳೆದರೂ ಆಂಬ್ಯುಲೆನ್ಸ್ ಬಾಗಿಲು ತೆರೆಯಲಾಗಲಿಲ್ಲ. ನಂತರ ಕೊಡಲಿಯಿಂದ ಬಾಗಿಲು ಒಡೆದು ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ತಕ್ಷಣ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಆಂಬ್ಯುಲೆನ್ಸ್‌ನಲ್ಲಿ ಒಬ್ಬ ವೈದ್ಯ ಮತ್ತು ಕೊಯಮೊನ್‌ನ ಇಬ್ಬರು ಸ್ನೇಹಿತರು ಇದ್ದರು. ಘಟನೆಯ ನಂತರ ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!