ಚಾಲಕನ ನಿಯಂತ್ರಣ ತಪ್ಪಿದ ಥಾರ್:‌ ಇಬ್ಬರ ಸಾವು, ಮಕ್ಕಳು ಸೇರಿ ಎಂಟು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನವದೆಹಲಿಯ ಮಲೈ ಮಂದಿರ ಪ್ರದೇಶದಲ್ಲಿ ಬುಧವಾರ ರಾತ್ರಿ ವೇಗವಾಗಿ ಬಂದ ಥಾರ್ ವಾಹನ ರಸ್ತೆ ಮೇಲಿದ್ದ ಅನೇಕ ಜನರ ಮೇಲೆ ಹರಿದಿದ್ದರಿಂದ ಇಬ್ಬರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಇಬ್ಬರು ಗಾಯಾಳುಗಳನ್ನು ಮುನ್ನಾ ಮತ್ತು ಸಮೀರ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಥಾರ್ ಚಾಲಕನ ಅತಿವೇಗದಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಥಾರ್ ಇತರ 2 ವಾಹನಗಳಿಗೂ ಡಿಕ್ಕಿ ಹೊಡೆದಿದೆ. ಗಾಯಾಳುಗಳು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಗೊಂಡವರು ಶಿವ ಕ್ಯಾಂಪ್, ವಸಂತ ವಿಹಾರ್ ಮತ್ತು ಏಕತಾ ವಿಹಾರ್, ಆರ್ಕೆ ಪುರಂ ನಿವಾಸಿಗಳು.
ಅಪಘಾತದಲ್ಲಿ ಒಂದು ಥಾರ್, 2- ನಾಲ್ಕು ಚಕ್ರಗಳು ಮತ್ತು ಮೂರು ವೆಂಡರ್ ಸ್ಟಾಲ್‌ಗಳಿಗೆ ಹಾನಿಯಾಗಿದೆ ಎಂದು ದೆಹಲಿ ಪೊಲೀಸರು ಕಂಡುಕೊಂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆಯಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ…

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!