ಮಾರ್ಚ್ 17 ರಿಂದ ದೆಹಲಿ ಬಜೆಟ್ ಅಧಿವೇಶನ : ಕೈಲಾಶ್ ಗಹ್ಲೋಟ್ ಬಜೆಟ್‌ ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ದೆಹಲಿ ಸರ್ಕಾರವು 2023-24ನೇ ಸಾಲಿನ ವಾರ್ಷಿಕ ಬಜೆಟ್ ಅನ್ನು ಮಾರ್ಚ್ 17 ರಿಂದ ಮಂಡಿಸಲಿದೆ.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಒಂದು ವಾರದ ಹಿಂದೆ ಬಂಧಿಸಲ್ಪಟ್ಟಿದ್ದ ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಅನುಪಸ್ಥಿತಿಯಲ್ಲಿ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನವು ಮಾರ್ಚ್ 23 ರಿಂದ ಪ್ರಾರಂಭವಾಗಲಿದೆ.

ಸಿಸೋಡಿಯಾ ಮತ್ತು ಇನ್ನೋರ್ವ ಆಪ್ ಸಚಿವ ಸತ್ಯೇಂದ್ರ ಜೈನ್ ತಮ್ಮ ಇಲಾಖೆಗಳಿಗೆ ರಾಜೀನಾಮೆ ನೀಡಿದ ನಂತರ ಗುರುವಾರ ಹೊಸದಾಗಿ ಹಂಚಿಕೆಯಾದ ಇಲಾಖೆಗಳ ಉಸ್ತುವಾರಿ ವಹಿಸಿಕೊಂಡ ಎಎಪಿ ಸಚಿವ ಕೈಲಾಶ್ ಗೆಹ್ಲೋಟ್ ಈ ಬಾರಿ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ.

ಇತ್ತೀಚೆಗೆ ಸಚಿವರಿಗೆ ಹಣಕಾಸು, ಯೋಜನೆ, ಲೋಕೋಪಯೋಗಿ (ಪಿಡಬ್ಲ್ಯೂಡಿ), ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ ಮತ್ತು ಪ್ರವಾಹ ನಿಯಂತ್ರಣ, ಮತ್ತು ಜಲ ಇಲಾಖೆಗಳನ್ನು ಹೆಚ್ಚುವರಿಯಾಗಿ ಯಾವುದೇ ಸಚಿವರಿಗೆ ನಿರ್ದಿಷ್ಟವಾಗಿ ಹಂಚಿಕೆ ಮಾಡದ ಎಲ್ಲಾ ಇಲಾಖೆಗಳ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!