ಜಗದೀಶ್ ಶೆಟ್ಟರ್ ಗೆ ದೆಹಲಿ ಬುಲಾವ್: ಮನಸ್ಸಿನ ಭಾವನೆ ತಿಳಿಸಿದ್ದೇನೆ ಎಂದ ಮಾಜಿ ಸಿಎಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ಸಿಎಂ ಜಗದೀಶ್ ಶೆಟ್ಟರ್ ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ಪ್ರಯಾಣಿಸಿದ್ದು,ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಜೆ.ಪಿ.ನಡ್ಡಾ ಜೊತೆ ಚರ್ಚೆ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನನ್ನ ಮನಸಿನಲ್ಲಿರುವ ಭಾವನೆಯನ್ನು ನಡ್ಡಾ ಅವರಿಗೆ ತಿಳಿಸಿದ್ದೇನೆ.

ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದೇನೆ ಎಂದರು.
ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದೇನೆ. ಹಿರಿಯರೊಂದಿಗೆ ಚರ್ಚಿಸಿ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!