Thursday, November 13, 2025

ದೆಹಲಿ ಕಾರು ಸ್ಫೋಟ: ಘಟನೆಯ ಮಾಹಿತಿ ಪ್ರಧಾನಿ ಮೋದಿಗೆ ನೀಡಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪು ಕೋಟೆ ಸಮೀಪ ಸಂಜೆ ಕಾರು ಸ್ಫೋಟಗೊಂಡು ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿದ್ದು,ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದೆ. ಇನ್ನು ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

ಈಗಾಗಲೇ ಶ್ವಾನದಳ, ಅಗ್ನಿ ಶಾಮಕದಳಗಳು ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು ತನಿಖೆ ಮುಂದುವರೆದಿದೆ. ದೆಹಲಿಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗೃಹ ಸಚಿವಾಲಯ ಎಲ್ಲಡೆ ಹೈ ಅಲರ್ಟ್​ ಘೋಷಿಸಿದೆ ಈ ಹಿನ್ನೆಲೆ ಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಅದರಂತೆ ಗಾಯಗೊಂಡವರನ್ನು ದೆಹಲಿ ಎಲ್​ಎನ್​ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರ ಹುಡುಕಾಟವನ್ನು ನಡೆಸಲಾಗಿದೆ ಎನ್ನುವ ಮಾಹಿತಿ ಕೇಂದ್ರದ ಮೂಲಗಳಿಂದ ತಿಳಿದು ಬಂದಿದೆ.

15ಕ್ಕೂ ಹೆಚ್ಚು ವಾಹನ ಭಸ್ಮ
ದೆಹಲಿಯ ಕಾರ್​ ಬ್ಲಾಸ್ಟ್​ನಿಂದ ಆಟೋ ಹಾಗೂ ಕಾರ್​ ಸೇರಿ 15 ವಾಹನಗಳು ಭಸ್ಮಗೊಂಡಿವೆ. ಇನ್ನು ಕೆಲವು ವಾಹನಗಳು ಜಖಂಗೊಂಡಿವೆ. ಈ ನಡುವೆ 16 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಅದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಜಾರಿಯಲ್ಲಿದೆ.

ಘಟನೆ ನಡೆದ ಕೆಲವೇ ನಿಮಿಷದಲ್ಲಿ ಸ್ಥಳಕ್ಕೆ ಆಗಮಿಸಿದ, ಶ್ವಾನದಳ ಅಗ್ನಿಶಾಮಕದಳಗಳೂ ಸ್ಥಳಕ್ಕೆ ದಾವಿಸಿ ಉನ್ನತ ಮಟ್ಟದ ಕಾರ್ಯಾಚರಣೆ ಮುನ್ನಡೆಸಿದ್ದಾರೆ. ಇಲ್ಲಿ ಕ್ಷಣ-ಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಿದ್ದು, ಗಾಯಗೊಂಡವರ ಅಂಕಿ ಸಂಖ್ಯೆಗಳು ಹೆಚ್ಚುತ್ತಿವೆ.

ಮೋದಿಗೆ ಮಾಹಿತಿ ನೀಡಿದ ಶಾ
ಬ್ಲಾಸ್ಟ್ ಬಗ್ಗೆ ಅಮಿತ್​ ಶಾ ಅವರು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಈಗಾಗಲೇ ಒಬ್ಬರನ್ನು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ದೇಶದ ವಿವಿದೆಡೆ ಹೈ ಅಲರ್ಟ್​ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಸ್ಥಿತಿಗಳ ಬಗ್ಗೆ ಮಾಹಿತಿ ಕ್ರೂಢೀಕರಿಸಲು ಅಮಿತ್​ ಶಾ- ಹಾಗೂ ನರೇಂಧ್ರ ಮೋದಿ ಸಭೆ ನಡೆಸುವ ಸಾಧ್ಯತೆಯೂ ಇದೆ.

error: Content is protected !!