BIG NEWS | ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯವು, ಒಂದು ಲಕ್ಷ ರೂ. ಬಾಂಡ್‌ ಪಡೆದು, ಜಾಮೀನು ಮಂಜೂರು ಮಾಡಿದೆ.

ಇದರೊಂದಿಗೆ ಅರವಿಂದ್‌ ಕೇಜ್ರಿವಾಲ್‌ ಅವರ ಮೂರು ತಿಂಗಳ ಜೈಲುವಾಸವೂ ತಾತ್ಕಾಲಿಕವಾಗಿ ಅಂತ್ಯವಾದಂತಾಗಿದೆ.

ಶುಕ್ರವಾರ ಬಾಂಡ್‌ ಬೇಲ್‌ಗೆ ಅರವಿಂದ್‌ ಕೇಜ್ರಿವಾಲ್‌ ಅರ್ಜಿ ಹಾಕಬಹುದಾಗಿದ್ದು, ಶುಕ್ರವಾರವೇ (ಜೂನ್‌ 21) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೇಲ್‌ ಬಾಂಡ್‌ಗಳನ್ನು ಸ್ವೀಕರಿಸಲು ಎರಡು ದಿನ ಟೈಮ್‌ ಬೇಕು ಎಂಬುದಾಗಿ ಇ.ಡಿ ಮನವಿ ಮಾಡಿತ್ತು. ಆದರೆ, ಇದಕ್ಕೆ ನ್ಯಾ. ನಿಯಾಯ್‌ ಬಿಂದು ಅವರು ನಕಾರ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!