ತಿಹಾರ್‌ ಜೈಲಿನಲ್ಲಿರುವ ದೆಹಲಿ ಸಿಎಂಗೆ ಅನಾರೋಗ್ಯ, ಇದ್ದಕ್ಕಿದ್ದಂತೆಯೇ ತೂಕ ಇಳಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮದ್ಯನೀತಿ ಪ್ರಕರಣದಲ್ಲಿ ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಅನಾರೋಗ್ಯ ಸಮಸ್ಯೆ ಕಾಡಿದ್ದು, ಕೆಲವೇ ದಿನಗಳಲ್ಲಿ 4.5 ಕೆಜಿಯಷ್ಟು ತೂಕ ಕಡಿಮೆಯಾಗಿದೆ.

ಮಾರ್ಚ್‌ 21ರಂದು ಬಂಧನಕ್ಕೊಳಗಾಗಿದ್ದ ಅರವಿಂದ್‌ ಕೇಜ್ರಿವಾಲ್‌ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ತಿಹಾರ್‌ ಜೈಲಿನಲ್ಲಿರುವ ಅಧಿಕಾರಿಗಳು ಹೇಳಿದ್ದರು.

ಆದರೆ ಇದೀಗ ರಕ್ತದಲ್ಲಿನ ಸಕ್ಕರೆ ಮಟ್ಟ ಏರುಪೇರಾಗಿದ್ದು, ಔಷಧ ನೀಡಲಾಗುತ್ತಿದೆ. ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಮನೆಯಿಂದ ಊಟ ನೀಡಲಾಗುತ್ತಿದೆ.

ಇಂದು ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!