ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ (Ayodhya) ರಾಮಮಂದಿರಕ್ಕೆ (Ram Mandir) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ರಾಮಲಲಾನ ದರುಶನ ಪಡೆದಿದ್ದರೆ
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಾಥ್ ನೀಡಿದ್ದು, ಇಂದು (ಸೋಮವಾರ) ಭೇಟಿ ನೀಡಿದರು. ಉಭಯ ನಾಯಕರ ಕುಟುಂಬದವರು ಜೊತೆಗೆ ಭೇಟಿ ನೀಡಿದರು.
माता-पिता और अपनी धर्मपत्नी के साथ आज अयोध्या जी पहुँचकर श्रीराम मंदिर में रामलला जी के दिव्य दर्शन करने का सौभाग्य प्राप्त हुआ। इस अवसर पर भगवंत जी एवं उनका परिवार भी साथ रहा। सबने मिलकर मर्यादा पुरुषोत्तम भगवान श्रीराम जी के दर्शन किए एवं देश की तरक़्क़ी के साथ समस्त मानवता के… pic.twitter.com/P6L8StiSOv
— Arvind Kejriwal (@ArvindKejriwal) February 12, 2024
ರಾಮಲಲಾಗೆ ಪ್ರಾರ್ಥನೆ ಸಲ್ಲಿಸಿದ ನಂತರ ನಾನು ವರ್ಣಿಸಲಾಗದ ಶಾಂತತೆಯನ್ನು ಅನುಭವಿಸಿದೆ. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಜನರ ಪ್ರೀತಿ ಮತ್ತು ಭಕ್ತಿಯನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ಪ್ರಾರ್ಥಿಸಿದ್ದೇನೆ ಎಂದು ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.
ರಾಮಲಲಾನ ದರ್ಶನ ಪಡೆಯುವುದು ನನ್ನ ಬಹುದಿನಗಳ ಆಸೆಯಾಗಿತ್ತು. ದೇಶದ ಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಪಂಜಾಬ್ ಸಿಎಂ ಮಾನ್ ಹೇಳಿದ್ದಾರೆ.