10 ದಿನಗಳ ಧ್ಯಾನದ ಬಳಿಕ ದೆಹಲಿಗೆ ಮರಳಿದ ದೆಹಲಿ ಸಿಎಂ ಕೇಜ್ರಿವಾಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನಲ್ಲಿ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ರಾಷ್ಟ್ರ ರಾಜಧಾನಿಗೆ ಮರಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕೇಜ್ರಿವಾಲ್, ’10 ದಿನಗಳ ವಿಪಶ್ಶನ ಧ್ಯಾನದ ಬಳಿಕ ಇಂದು ಮರಳಿದ್ದೇನೆ. ಈ ಧ್ಯಾನವು ಅಪಾರ ಶಾಂತಿಯನ್ನು ನೀಡುತ್ತದೆ. ಇಂದಿನಿಂದ ಮತ್ತೆ ಹೊಸ ಚೈತನ್ಯದೊಂದಿಗೆ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುತ್ತೇನೆ. ಎಲ್ಲರಿಗೂ ಶುಭವಾಗಲಿ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!