ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಿದ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಭಾರತ ರತ್ನ ನೀಡಬೇಕು. ಆದರೆ ರಾಜಕೀಯ ದುರುದ್ದೇಶದಿಂದ ಅವರ ವಿರುದ್ಧ ಕೇಸ್ ದಾಖಲಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಎದುರಿಸಲಿರುವ ಗುಜರಾತ್ ಗೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಇಂದು ಐದನೇ ಬಾರಿ ಕೇಜ್ರಿವಾಲ್ ಭೇಟಿ ನೀಡಿದ್ದು, ಆದರೆ ಕೇಂದ್ರ ಸರ್ಕಾರ ಸಿಸೋಡಿಯಾ ಅವರನ್ನು ಮೆಚ್ಚುವ ಬದಲು ಟಾರ್ಗೆಟ್ ಮಾಡುತ್ತಿದೆ ಎಂದರು.
ಶೀಘ್ರದಲ್ಲೇ ಸಿಸೋಡಿಯಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ಕೇಜ್ರಿವಾಲ್, ನನ್ನನ್ನೂ ಬಂಧಿಸಬಹುದು. ಯಾರಿಗೆ ಗೊತ್ತು ಎಂದು ದೆಹಲಿ ಸಿಎಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.