ಉದ್ಯೋಗಕ್ಕಾಗಿ ಭೂ ಹಗರಣ : ಮಾರ್ಚ್ 25 ರಂದು ಸಿಬಿಐ ವಿಚಾರಣೆಗೆ ಹಾಜರಾಗಲು ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 25 ರಂದು ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಹೈಕೋರ್ಟ್ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಸೂಚನೆ ನೀಡಿದೆ.

ಸಿಬಿಐ ಪರ ವಕೀಲ ಡಿಪಿ ಸಿಂಗ್ ನ್ಯಾಯಾಲಯದ ಮುಂದೆ ಯಾದವ್ ಅವರು ಈ ತಿಂಗಳು ಖುದ್ದಾಗಿ ಹಾಜರಾಗಬಹುದು. ಸಿಬಿಐ ಅವರನ್ನು ಬಂಧಿಸಬಾರದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ಹಾಜರಾಗುವುದಾಗಿ ಬಿಹಾರ ಉಪ ಮುಖ್ಯಮಂತ್ರಿ ವಕೀಲರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!